Tuesday, 26 January 2016

ಬಸವಣ್ಣ ವಚನ ೯

ಇಂದಿಂಗೆಂತು ನಾಳಿಂಗೆಂತೆಂದು ಬೆಂದೊಡಲ ಹೊರೆಯ ಹೋಯಿತ್ತೆನ್ನ ಸಂಸಾರ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ! ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ! ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದಹುದೀ ಮಾಯೆ ಕೂಡಲಸಂಗಮದೇವ!

No comments:

Post a Comment