Tuesday, 26 January 2016

ಬಸವಣ್ಣ ವಚನ ೧೫

ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವುದಯ್ಯ. ಚಂದ್ರ ಕುಂದೆ ಕುಂದುವುದಯ್ಯ, ಚಂದ್ರಂಗೆ ರಾಹು ಅಡ್ಡ ಬಂದಲ್ಲಿ ಅಂಬುಧಿ ಬೊಬ್ಬಿಟ್ಟಿತ್ತೇ ಅಯ್ಯ ? ಅಂಬುಧಿಯ ಮುನಿ ಆಪೋಶನವ ಕೊಂಡಲ್ಲಿ ಚಂದ್ರಮನಡ್ಡ ಬಂದನೆ ಅಯ್ಯ ? ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ ಜಗದ್ ನಂಟ ನೀನೇ ಅಯ್ಯ ಕೂಡಲಸಂಗಮದೇವ.

No comments:

Post a Comment