Tuesday, 26 January 2016

ಬಸವಣ್ಣ ವಚನ ೧೭

ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲ ಬಾರದು. ಏರಿ ನೀರುಂಬಡೆ, ಬೇಲಿ ಕೈಯ ಮೇವಡೆ ನಾರಿ ತನ್ನ ಮನೆಯಲ್ಲಿ ಕಳುವಡೆ ತಾಯ ಮೊಲೆವಾಲು ನಂಜಾಗಿ ಕೊಲುವಡೆ ಇನ್ನಾರಿಗೆ ದೂರುವೆ ತಂದೆ ಕೂಡಲಸಂಗಮದೇವ ನೀ ಹುಟ್ಟಿಸಿ ಜೀವನ ಭವದುಃಖಿಯ ಮಾಡಿದ ಬಳಿಕ. ಬಿಡಿಸುವರಾರುಂಟು ?

No comments:

Post a Comment